Posts

BPN NEWS_24x7

kuwj ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಟರಾಜ್ ಬಿಪಿ ಆಯ್ಕೆ

Image
ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪತ್ರಕರ್ತರಾದ ನಟರಾಜ್ ಬಿ.ಪಿ. ಅವರು ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ನಗರದ ವಿವಿಧ ಪತ್ರಿಕಾ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಸ್ಯರು ತಮ್ಮ ಅಮೂಲ್ಯ ಮತಗಳ ಮೂಲಕ ನಟರಾಜ್ ಬಿ.ಪಿ. ಅವರಿಗೆ ಬೆಂಬಲ ಸೂಚಿಸಿದ್ದು, ಸಂಘಟನೆಯಲ್ಲಿ ಅವರ ಸಕ್ರಿಯತೆ ಮತ್ತು ನಿಷ್ಠೆಗೆ ಮನ್ನಣೆ ನೀಡಿದಂತಾಗಿದೆ. ಚುನಾವಣೆ ಶಾಂತಿಪೂರ್ಣ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆದಿದ್ದು, ಫಲಿತಾಂಶ ಪ್ರಕಟವಾದ ಕ್ಷಣದಿಂದಲೇ ಪತ್ರಕರ್ತ ವಲಯದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸಂಘಟನೆಯ ಹಿತಾಸಕ್ತಿಗಾಗಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿರುವ ನಟರಾಜ್ ಬಿ.ಪಿ. ಅವರು ಪತ್ರಕರ್ತರ ವೃತ್ತಿಪರ ಭದ್ರತೆ, ಸಾಮಾಜಿಕ ಗೌರವ, ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಜಾರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸಂಘಟನೆಯನ್ನು ಇನ್ನಷ್ಟು ಸಂಘಟಿತಗೊಳಿಸಿ, ಸದಸ್ಯರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಅವರು, “ನನ್ನ ಮೇಲೆ ವಿಶ್ವಾಸ ಇಟ್ಟು ಮತ ನೀಡಿದ ಪ್ರತಿಯೊಬ್ಬ ಪತ್ರಕರ್ತ ಸ್ನೇಹಿತರಿಗೆ ನಾನು ಸದಾ ಋಣಿ. ಈ ವಿಶ್ವಾಸಕ್ಕೆ ತಕ್ಕ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಂಘಟನೆಯ ಬಲವರ್ಧನೆಗಾಗಿ ಶ್ರಮಿಸುತ್ತೇನೆ”...

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಬಾಲಕನ ಮೇಲೆ ಹಲ್ಲೆ ಆರೋಪ

Image
ಬೆಂಗಳೂರು: ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪೋಷಕರ ಹೇಳಿಕೆಯ ಪ್ರಕಾರ, ಶ್ರೀ ಕನಕ ಇಂಗ್ಲಿಷ್ ಸ್ಕೂಲ್‌ನಲ್ಲಿ ಓದುತ್ತಿರುವ ಬಾಲಕನಿಗೆ ಶಿಕ್ಷಕಿ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಇದೇ ರೀತಿಯ ಘಟನೆ ನಡೆದಿದ್ದಾಗಿ ಪೋಷಕರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪೋಷಕರು ಶಾಲೆಗೆ ತೆರಳಿ ಪ್ರಶ್ನಿಸಿದ ಬಳಿಕ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗ ಶಿಕ್ಷಕಿ ಪೊಲೀಸರ ಮುಂದೆ ಕ್ಷಮೆಯಾಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೂ, ನಿನ್ನೆ ಮತ್ತೆ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿದಾಗ, ಅವರಿಗೆ ತಕ್ಕ ಮರ್ಯಾದೆ ನೀಡದೇ ಮಾತನಾಡಲಾಗಿದೆ ಎಂಬ ದೂರೂ ಕೇಳಿಬಂದಿದೆ. ಟಿಸಿ (Transfer Certificate) ನೀಡಿ ಶಾಲೆಯಿಂದ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇನ್ನೊಂದೆಡೆ, ಶಾಲಾ ಆಡಳಿತ ಮಂಡಳಿ “ಮಕ್ಕಳಿಗೆ ಹೊಡೆದು ಪಾಠ ಮಾಡುವುದಿಲ್ಲ; ಇಷ್ಟವಿಲ್ಲದಿದ್ದರೆ ಮಕ್ಕಳನ್ನು ಕರೆದುಕೊಂಡು ಹೋಗಬಹುದು” ಎಂದು ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

Image
ಬೆಂಗಳೂರು : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಮುದಾಯಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು, ಸೌಲಭ್ಯಗಳು ಮತ್ತು ಮೀಸಲಾತಿ ಸಂಬಂಧಿತ ವಿಚಾರಗಳನ್ನು ಚರ್ಚಿಸಿದರು. ಬಜೆಟ್‌ನಲ್ಲಿ ಶೋಷಿತ ವರ್ಗಗಳಿಗೆ ನ್ಯಾಯಸಮ್ಮತ ಹಂಚಿಕೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು. ಈ ವೇಳೆ ಸೂರ್ಯವಂಶ ಕ್ಷತ್ರಿಯ ಸಮಾಜದ ಮುಖಂಡರಾದ ರಾಘವ್ ಸೂಲೆಗೈ ಅವರು ತಮ್ಮ ಸಮಾಜ ಎದುರಿಸುತ್ತಿರುವ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿ, ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ

Image
ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ ಬೆಂಗಳೂರು : ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶರ್ಮಾಸ್ ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವದ ಅಂಗವಾಗಿ “ಶರ್ಮಾಸ್ ಪರ್ವ” ಎಂಬ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಪ್ರಸನ್ನ ಶರ್ಮ, ನಿರ್ದೇಶಕರಾದ ಗಜೇಂದ್ರ ಶರ್ಮ, ಕಾರ್ಯದರ್ಶಿ ಮಾಧುರಿ ಶರ್ಮ ಹಾಗೂ ವ್ಯವಸ್ಥಾಪಕರಾದ ಸಂಜಯ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಅಕಾಡೆಮಿಯ ಆರು ಶಾಖೆಗಳ ವಿದ್ಯಾರ್ಥಿಗಳು ನೃತ್ಯ ರೂಪಕಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಪ್ರೇಕ್ಷಕರಿಂದ ಭಾರೀ ಚಪ್ಪಾಳೆ ಪಡೆದರು. ಕಾರ್ಯಕ್ರಮದಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಪ್ರಸನ್ನ ಶರ್ಮ, ಅಕಾಡೆಮಿ ಕಳೆದ 23 ವರ್ಷಗಳಿಂದ ನೃತ್ಯಕಲೆಯ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು. ಯುವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ಕಲೆ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಿದೆ; ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಗುರ...

ಅರುವೇಲು ನಿಯೋಗಿ ಬ್ರಾಹ್ಮಣ ಸಂಘದ 16ನೇ ವರ್ಷದ ಸರ್ವ ಸದಸ್ಯರ ಮಹಾಸಭೆ

Image
ಬೆಂಗಳೂರು: ನಗರದ ಬುಲ್ ಟೆಂಪಲ್ ರಸ್ತೆಯಲ್ಲಿರುವ ಗಾಂಜಾಂ ಮಂಟಪದಲ್ಲಿ ಅರುವೇಲು ನಿಯೋಗಿ ಬ್ರಾಹ್ಮಣ ಸಂಘದ 16ನೇ ವರ್ಷದ ಸರ್ವ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿತ್ತು.  ಇದೇ ಸಂದರ್ಭದಲ್ಲಿ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು. ಸಭೆಯನ್ನು ಉದ್ದೇಶಿಸಿ ಸಂಘದ ಅಧ್ಯಕ್ಷರಾದ ವೈ.ಆರ್. ಜನಾರ್ಧನ್ ರಾವ್ ಅವರು ಮಾತನಾಡಿ, ಸಂಘವು 16 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಅವಧಿಯಲ್ಲಿ ಹಲವು ಜನೋಪಯೋಗಿ ಹಾಗೂ ಸಮಾಜಮುಖಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಈ ವರ್ಷದ ಪ್ರಮುಖ ಯೋಜನೆಯಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಸರ್ವ ಸದಸ್ಯರು ಈ ಯೋಜನೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ನರಸರಾಮರಾವ್ ಅವರು ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ತಿಳುವಳಿಕೆ ಪತ್ರವನ್ನು ಮಂಡಿಸಿ, ಸಭೆಯ ನಡವಳಿಕೆಗಳನ್ನು ಓದಿ ದಾಖಲಿಸಿದರು. ಜೊತೆಗೆ ಸಂಘದ 2024–25ನೇ ಸಾಲಿನ ವಾರ್ಷಿಕ ವರದಿ, ಹೊಸ ನಿರ್ಣಯಗಳು ಹಾಗೂ ಯೋಜನೆಗಳು ಮತ್ತು 2025–26ನೇ ಸಾಲಿನ ಅಂದಾಜು ಆಯವ್ಯಯವನ್ನು ಸರ್ವ ಸದಸ್ಯರ ಮುಂದೆ ಮಂಡಿಸಿದರು. ಸಭೆಯಲ್ಲಿ ನಿರ್ಣಯಗಳು ಹಾಗೂ ಲೆಕ್ಕ ತಪಾಸಣಾ ವರದಿಯನ್ನು ಪರಿಶೀಲಿಸಿದ ಬಳಿಕ ಸರ್ವ ಸದಸ್ಯರು ಅವುಗಳನ್ನು ಏಕಮತದಿಂದ ಅಂಗೀಕರಿಸಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಸಂಘದ ಸದಸ್ಯರಿಗೆ...

ಬೆಂಗಳೂರು: ನಾರಾಯಣ e-ಟೆಕ್ನೋ & ಒಲಿಂಪಿಯಾಡ್ ಶಾಲೆಯ 13ನೇ ವಾರ್ಷಿಕೋತ್ಸವ ‘ಉತ್ಸವಂ’ ಭವ್ಯವಾಗಿ ಜರುಗಿ

Image
ಬೆಂಗಳೂರು : ವಿದ್ಯಾರಣ್ಯಪುರದ ನಾರಾಯಣ e-ಟೆಕ್ನೋ ಮತ್ತು ಒಲಿಂಪಿಯಾಡ್ ಶಾಲೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ‘ಉತ್ಸವಂ’ ಶೀರ್ಷಿಕೆಯಲ್ಲಿ ಆಯೋಜಿಸಲ್ಪಟ್ಟ ವಾರ್ಷಿಕ ದಿನಾಚರಣೆ ನಗರದ ಅಂಬೇಡ್ಕರ್ ಭವನದಲ್ಲಿ ಭವ್ಯವಾಗಿ ನೆರವೇರಿತು. ನರ್ಸರಿ ಇಂದಾಗಿ ಹೈಸ್ಕೂಲ್‌ವರೆಗೆ ವಿವಿಧ ತರಗತಿಯ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ, ಸಾಂಸ್ಕೃತಿಕ ಕೌಶಲ್ಯ ಹಾಗೂ ಕ್ರೀಡಾ ವೈಭವಕ್ಕೆ ಈ ವೇದಿಕೆ ಸಾಕ್ಷಿಯಾಯಿತು. ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಕಣ್ತುಂಬಿಕೊಂಡು ಪಾಲಕರು ಮತ್ತು ವಿಶೇಷ ಆಹ್ವಾನಿತರು ದೊಡ್ಡ ಸಂಖ್ಯೆಯಲ್ಲಿ ಹಾಜರಿದ್ದು, ಕಾರ್ಯಕ್ರಮಕ್ಕೆ ಮಂದಹಾಸದ ಚೈತನ್ಯ ತುಂಬಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇಸ್ರೋ ವಿಜ್ಞಾನಿಗಳಾದ ಸುರೇಶ್ ಆರ್ ನಾಯಕ್ ರವರು ಮಕ್ಕಳ ವೈಜ್ಞಾನಿಕ ಕುತೂಹಲ, ಸಂಶೋಧನಾ ಮನೋಭಾವ ಹಾಗೂ ಭವಿಷ್ಯದ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳ ಕೊಡುಗೆ ಕುರಿತಾಗಿ ಪ್ರೇರಣಾದಾಯಕವಾಗಿ ಮಾತನಾಡಿದರು. “ಶಿಕ್ಷಣದ ಜೊತೆಗೆ ವಿಜ್ಞಾನ ಮನೋಭಾವ ಬೆಳೆಸಿದಾಗ ಮಾತ್ರ ಮುಂದಿನ ಪೀಳಿಗೆ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಲಿದೆ,” ಎಂದು ಅವರು ಮಕ್ಕಳನ್ನು ಉದ್ದೇಶಿಸಿ ಹೇಳಿದರು. ಯಲಹಂಕ ಉಪವಿಭಾಗದ ಸಹ ಪೊಲೀಸ್ ಆಯುಕ್ತ ನರಸಿಂಹಮೂರ್ತಿ ಪಿ ರವರು ವಿದ್ಯಾರ್ಥಿಗಳಲ್ಲಿ ಶಿಸ್ತು, ನೈತಿಕ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮದ ಅಗತ್ಯತೆಯನ್ನು ಸವಿಸ್ತಾರವಾಗಿ ವಿವರ...

ನವೆಂಬರ್ 22ರಂದು ಜಮ್ಮು, ಕಾಶ್ಮೀರದ ಪೆಹಲ್ಗಾಮ್ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ

Image
ಬೆಂಗಳೂರು : ಜಿಬಿಎ ನೌಕರರ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ನವೆಂಬರ್ 22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ಹತ್ಯೆಯಾದ ಭಾರತಾಂಬೆ ಮಕ್ಕಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಮಾಧ್ಯಮಗೋಷ್ಟಿ ಮತ್ತು ಪೋಸ್ಟರ್ ಬಿಡುಗಡೆ ಸಮಾರಂಭದ ಕುರಿತು ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕನ್ನಡ ಭಾಷೆಗೆ 2500ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆ ಲಿಪಿಗಳ ರಾಣಿ ಎಂಬ ಬಿರುದಾಂಕಿತವಾಗಿದೆ. ಕನ್ನಡ ಭಾಷೆ ಉಳಿಸಿ, ಬೆಳಸಬೇಕು ವಿಶ್ವಭಾಷೆಯಾಗಿ ಮಾಡಬೇಕು ಉದ್ದೇಶದಿಂದ ಪ್ರಥಮ ಬಾರಿಗೆ 2022ರಲ್ಲಿ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ನಂತರ 2023ರಲ್ಲಿ ನೇಪಾಳ ಪಶುಪತಿ ದೇವಾಲಯ ಸನ್ನಿಧಾನದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು 2024ರಲ್ಲಿ ಹರಿದ್ವಾರದಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಇದೀಗ 2025ರ ನವೆಂಬರ್ 22ಸಂಜೆ 4ಗಂಟೆಗೆ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗ...