ಸಂಕ್ರಾಂತಿ ಹಬ್ಬ ಒಕ್ಕಲಿಗರ ಹಬ್ಬದ


ಸಂಕ್ರಾಂತಿ ಹಬ್ಬ ಒಕ್ಕಲಿಗರ ಹಬ್ಬದ 9ನೇ  ವಾರ್ಷಿಕೋತ್ಸವ



ಬೆಂಗಳೂರು : ವಿಶ್ವ ಒಕ್ಕಲಿಗರ ಮಹಾ ವೇದಿಕೆ (ರಿ) ವತಿಯಿಂದ ಸಂಕ್ರಾಂತಿ ಹಬ್ಬ ಒಕ್ಕಲಿಗರ ಹಬ್ಬದ 9ನೇ  ವಾರ್ಷಿಕೋತ್ಸವವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರು ಡಾ॥ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ರಾಸುಗಳನ್ನು ಕಿಚ್ಚು ಹಾರಿಸುವುದು ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ನಂತರ "ವಿಶ್ವಮಾನ್ಯ ಒಕ್ಕಲಿಗ ಪ್ರಶಸ್ತಿ" ಹಾಗೂ "ಸಾಮಾನ್ಯ ರೈತ ಅಸಾಮಾನ್ಯ ಸಾಧನೆ ಪ್ರಶಸ್ತಿ" ನೀಡಿ ಗಣ್ಯರಿಗೆ ಸನ್ಮಾನಿಸಲಾಯಿತು. 
ಈ ಸಂದರ್ಭದಲ್ಲಿ ಮಲ್ಲೇಶ್ವರಂ ಶಾಸಕರಾದ ಅಶ್ವತ್ಥ್ ನಾರಾಯಣ್, ಬಿಬಿಎಂಪಿ ಸದಸ್ಯರಾದ ಚಂದ್ರಕಲಾ ಗಿರೀಶ್ ಲಕ್ಕಣ್ಣ, ಕಲಾವಿದರು, ಗಣ್ಯರು, ಹಾಗೂ ನಾಗರಿಕರು ಉಪಸ್ಥಿತರಿದ್ದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ