ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತಿಲ್ಲ : ವಿ. ಸೋಮಣ್ಣ
ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತಿಲ್ಲ : ವಿ. ಸೋಮಣ್ಣ
ಮಾಜಿ ಸಚಿವ ವಿ ಸೋಮಣ್ಣ ನವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ತುರ್ತು ಪತ್ರಿಕಾಗೋಷ್ಠಿ ನಡೆಸಿದ ವಿ. ಸೋಮಣ್ಣನವರು ಖಾಸಗಿ ಮಾಧ್ಯಮದಲ್ಲಿ ಪ್ರಕಟವಾದ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ ವರದಿಯನ್ನು ತಳ್ಳಿ ಹಾಕಿದ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ ನಮ್ಮ ನಾಯಕರಾದ ಸನ್ಮಾನ್ಯ ಅನಂತಕುಮಾರ್ ಹಾಗೂ ಯಡಿಯೂರಪ್ಪನವರು ತೀರ್ಮಾನದಂತೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸೂಚಿಸುತ್ತಾರೋ ಆ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದನಾಗಿದ್ದೇನೆ.
ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ಮಾತಿಲ್ಲ ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ನಾನು ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
Comments
Post a Comment