ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲು
ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲು
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಶನಿವಾರ ವಿಧಾನಸಭೆಯಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ನ್ಯಾಯವಾದಿ ಜ್ಞಾನಪ್ರಕಾಶ್ ದೂರು ದಾಖಲಿಸಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಿದ್ದರೂ ಬಿಜೆಪಿ ಮುಖಂಡರಾದ ಯಡಿಯೂರಪ್ಪ ವಿಧಾನಸಭೆಯ ಸದನದಿಂದ ಹೊರ ನಡೆದಿದ್ದರು ಎಂದು ನ್ಯಾಯವಾದಿ ಜ್ಞಾನಪ್ರಕಾಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕುಂಡಾನ್ಯಾಯಾಲಯ ದೂರು ಸ್ವೀಕರಿಸಿದ್ದು, ಮುಂದಿನ ವಿಚಾರಣೆ ಮೇ 29ಕ್ಕೆ ನಿಗದಿಪಡಿಸಲಾಗಿದೆ.
Comments
Post a Comment