ಡಿ.ಕೆ. ಶಿವಕುಮಾರ್ ಬಂಡೆಯೊಳಗಿನ ವಜ್ರ “ಡೈನಾಮಿಕ್ ಹೀರೋ” :: ಸಮೀವುಲ್ಲಾ

ಡಿ.ಕೆ. ಶಿವಕುಮಾರ್ ಬಂಡೆಯೊಳಗಿನ ವಜ್ರ“ಡೈನಾಮಿಕ್ ಹೀರೋ” ::  ಸಮೀವುಲ್ಲಾ

ಗುರುಪ್ಪನಪಾಳ್ಯ ಬ್ಲಾಕ್ ಕಾಂಗ್ರೆಸ್ಸಿನಿಂದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಸಮಾರಂಭ


            ಬೆಂಗಳೂರು; ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಇಂದು ಪ್ರತಿಜ್ಞಾವಿಧಿ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಬಂಡೆಯೊಳಗಿನ ವಜ್ರರೂಪದ ಡೈನಾಮಿಕ್ ಹೀರೋ ಎಂದು ಬಿಟಿಎಂ ಲೇಔಟ್‍ನ ಗುರುಪ್ಪನಪಾಳ್ಯದ ಕಾಂಗ್ರೆಸ್‍ನ ಹಿರಿಯ ಮುಖಂಡ ಹಾಗೂ ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಮೀವುಲ್ಲಾ ಬಣ್ಣಿಸಿದ್ದಾರೆ.

    ಗುರುಪ್ಪನ ಪಾಳ್ಯದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೂತನ ಅಧ್ಯಕ್ಷರ ವೀಡಿಯೋ ಕಾನ್ಪರೆನ್ಸ್ ಮೂಲಕ ಪ್ರತಿಜ್ಞಾ ವಿಧಿ ಸಮಾರಂಭವನ್ನು ವೀಕ್ಷಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮದೇ ಆದ ಸುದೀರ್ಘ ಕೊಡುಗೆ ನೀಡಿದ್ದಾರೆ. ಅವರು ಕೇವಲ ಕನಕಪುರದ ಬಂಡೆಯಲ್ಲ ಬಂಡೆಯೊಳಗಿನ ವಜ್ರ ಅಂದರೆ ಡೈನಾಮಿಕ್ ವ್ಯಕ್ತಿತ್ವ ಹೊಂದಿರುವ ಅಪರೂಪದ ರಾಜಕಾರಣಿ ಮುಂಬರುವ ದಿನಗಳಲ್ಲಿ ಇವರ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಬೇಕು ಎಂದು ಶುಭ ಹಾರೈಸಿದರು.

ವಿಡಿಯೊ ನೋಡಲು ಈ ಕೆಳಗೆ ಕ್ಲಿಕ್ ಮಾಡಿ 

click here to watch this video 

    ಬಿಟಿಎಂ ಲೇಔಟ್ ಕ್ಷೇತ್ರದ ಜನಪ್ರಿಯ ಶಾಸಕರು ಕಾಂಗ್ರೆಸ್‍ನ ಹಿರಿಯ ಮುಖಂಡರಾದ ರಾಮಲಿಂಗಾ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ಈ ರಾಜ್ಯದ  ಉಪ ಮುಖ್ಯಮಂತ್ರಿಯಾಗಬೇಕು ಈ ಕ್ಷೇತ್ರದಲ್ಲಿ ಅನೇಕ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಅವರು ನಮಗೆ ನೆಚ್ಚಿನ ನಾಯಕರಾಗಿದ್ದಾರೆ, ಜಯನಗರ ಕ್ಷೇತ್ರದ ಶಾಸಕರಾದ ಸೌಮ್ಯ ರೆಡ್ಡಿ ತಂದೆಗೆ ತಕ್ಕ ಮಗಳಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಎಲ್ಲರನ್ನೂ ವಿಶ್ವಾಸದಿಂದ ಕೊಂಡೊಯ್ಯುತ್ತಿದ್ದಾರೆ ಎಂದರು.

      ಗುರುಪ್ಪನಪಾಳ್ಯ ಬ್ಲಾಕ್ ಯುವ ಕಾಂಗ್ರೇಸ್ ಅಧ್ಯಕ್ಷ ಸುನಾಮಿ ಮಿಯಾಂದಾದ್ ಮಾತನಾಡಿ ಪಕ್ಷವನ್ನು ಮುಂಬರುವ ದಿನಗಳಲ್ಲಿ ಬ್ಲಾಕ್ ಮಟ್ಟದಲ್ಲಿ ಅಗತ್ಯವಿದೆ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸಲಾಗುವುದು.  ಬ್ಲಾಕ್ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದರು.

     ಕೆಪಿಸಿಸಿ ಬೆಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಶಿವರಾಮ್ ಹೆಗಡೆ ಮಾತನಾಡಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷವನ್ನು ಬೆಂಗಳೂರು ನಗರದಲ್ಲಿ ಇನ್ನಷ್ಟು ಬಲಗೊಳಿಸಿ ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. 

         ಕಾರ್ಯಕ್ರಮದಲ್ಲಿ ಕೆಪಿಸಿಸಿ ಬೆಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಶಿವರಾಮ್ ಹೆಗಡೆ,  ಬ್ಲಾಕ್ ಕಾಂಗ್ರೆಸ್‍ನ ಮುಖಂಡರಾದ ದಿವಾಕರ್, ಜಮೀರ್, ಯುವ ಕಾಂಗ್ರೇಸ್‍ನ ಅಣ್ಣಪ್ಪ ಮತ್ತಿತರರು ಭಾಗವಹಿಸಿದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ