ಭಾರತ್ ಬಂದ್ ಗೆ ದಲಿತ ಯುವಕರ ಸೇವಾ ದಳದ ಬೆಂಬಲ : ಎಸ್. ವೆಂಕಟೇಶ್

 ಭಾರತ ಬಂದ್‌ಗೆ ದಲಿತ ಯುವಕರ ಸೇವಾದಳದ ಬೆಂಬಲ : ಎಸ್.ವೆಂಕಟೇಶ್ 

       ಬೆಂಗಳೂರು : ಕೇಂದ್ರದ ನೂತನ ಕೃಷಿ ಮಸೂದೆ ವಿರೋಧಿಸಿ ಡಿ.8ರಂದು ಕರೆ ನೀಡಿರುವ ಭಾರತ ಬಂದ್‌ಗೆ ದಲಿತ ಯುವಕರ ಸೇವಾದಳ ಬೆಂಬಲ ಸೂಚಿಸಿದೆ.

     ದಲಿತ ಯುವಕರ ಸೇವಾದಳದ ಅಧ್ಯಕ್ಷ ಎಸ್. ವೆಂಕಟೇಶ್ ಮಾತನಾಡಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದಾರೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುವ ಭಾರತ ಬಂದ್‌ನಲ್ಲಿ ನಾವು ಕೂಡ ಪಾಲ್ಗೊಳ್ಳಲಿದ್ದೇವೆ ಎಂದು ತಿಳಿಸಿದರು.

ವಿಡಿಯೋ ನೋಡಲು ಈ ಕೆಳಗೆ ಕ್ಲಿಕ್ ಮಾಡಿ 

Click here to watch this video 

     ದೆಹಲಿ ಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ದಲಿತ ಯುವಕರ ಸೇವಾ ದಳದ ಬೆಂಬಲವಿದೆ, ಬೇರೆ ಬೇರೆ ಜಿಲ್ಲೆಗಳಿಂದ ರೈತರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲರೂ ಸೇರಿ ಪ್ರತಿಭಟನೆ ನಡೆಸಲಿದ್ದೇವೆ. ನಾವು ಕೂಡ ಎಪಿಎಂಸಿ ಬಿಲ್ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳಿಂದ ರೈತರ ಕಲ್ಯಾಣವಾಗುವುದಿಲ್ಲ ಎಂದರು. 

      ದೇಶದ ರೈತರು ಅಲ್ಪಸ್ವಲ್ಪ ಉಸಿರಾಡುತ್ತಿರುವುದು ಕೃಷಿ ಉತ್ಪನ್ನ ಮಾರುಕಟ್ಟೆಗಳು ಮತ್ತು ಕನಿಷ್ಠ ಬೆಂಬಲ ಬೆಲೆಯಿಂದಾಗಿ, ಆದರೆ ಎಪಿಎಂಸಿಗಳನ್ನು ಕೇಂದ್ರ ಸರ್ಕಾರ ನಗಣ್ಯಗೊಳಿಸುವ, ಅದರ ಮೂಲಕ ನಾಶಪಡಿಸುವ ಉದ್ದೇಶ ಹೊಂದಿದೆ. ಖಾಸಗಿ ಮಂಡಿಗಳನ್ನು ತಂದು, ರೈತರನ್ನು ಮೊದಮೊದಲು ಆಕರ್ಷಿಸಿನಂತರ ಪಾತಾಳಕ್ಕೆ ತಳ್ಳುವ ಕಾಯ್ದೆಯಿದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ