Posts

Showing posts from May, 2021

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತ ಮೂಡಿಸುವಂತೆ ಕಾರ್ಯಕರ್ತರಿಗೆ ಕರೆ

Image
ಕೊರೊನಾ ವೈರಸ್ ಬಗ್ಗೆ  ಜನರಲ್ಲಿ ಜಾಗೃತ ಮೂಡಿಸುವಂತೆ  ಕಾರ್ಯಕರ್ತರಿಗೆ ಕರೆ  ಕರುನಾಡ ಜನಸ್ಪಂದನ ವೇದಿಕೆಯ ಅಧ್ಯಕ್ಷ  ನಟರಾಜ್ ಬಿ.ಪಿ           ಕೊರೊನಾ ವೈರಸ್ ಬಗ್ಗೆ ಜನರು ಭಯಪಡುವ ಬದಲು ಮುಂಜಾಗ್ರತೆ ವಹಿಸಬೇಕು. ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಬೇಕು ಕೊರೊನಾ ವೈರಸ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ  ಕರುನಾಡ ಜನಸ್ಪಂದನ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ನಟರಾಜ್ ಬಿ.ಪಿ ಕರೆ ನೀಡಿದರು.     ಭಾರತದಲ್ಲಿ ಕೋವಿಡ್-19 ಭಾರಿ ಹಾನಿಯನ್ನುಂಟು ಮಾಡುತ್ತಿದ್ದು ಈ ಪಿಡುಗಿನಿಂದ ಸಂಭವಿಸುತ್ತಿರುವ ಸಾವು-ನೋವಿನ ವರದಿಗಳು ಭಯಾನಕ ಹಾಗೂ ಹೃದಯ ಹಿಂಡುವಂತಿವೆ ಎಂದು ಕರುನಾಡ ಜನಸ್ಪಂದನ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಟರಾಜ್ ಬಿ.ಪಿ ಆತಂಕ ವ್ಯಕ್ತಪಡಿಸಿದ್ದಾರೆ.       ಜಗತ್ತು ಕಂಡು ಕೇಳರಿಯದ ರೀತಿಯಲ್ಲಿ ಕೊರೊನಾ ವೈರಸ್ ಆವರಿಸಿ ಜನರನ್ನು ಭಯಭೀತರನ್ನಾಗಿಸಿತ್ತು. ಇತ್ತೀಚೆಗೆ ಲಸಿಕೆ ಬಂದ ನಂತರ ಜನರು ಭಯದಿಂದ ಹೊರಬಂದು ಚೇತರಿಸಿಕೊಳ್ಳುತ್ತಿರುವುದು ಕಂಡು ಬರುತ್ತಿತ್ತು ಆದರೆ ಈಗ ಕೊರೊನಾ ವೈರಸ್ ಎರಡನೇ ಅಲೆ ಸಾಗರೋಪಾದಿಯಲ್ಲಿ ಹರಡುವ ಮೂಲಕ ಮತ್ತೆ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದು ಕಂಡು ಬರುತ್ತಿದೆ.  ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ ಡೌನ್ ಗೆ ಕರೆ ನೀಡಿದೆ,  ಕೊರಾನಾ ಎರಡನೇ ಅಲೆ ರಾ