ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯರವರ ಪರ ಬಿ. ನಾರಾಯಣ ಸ್ವಾಮಿ ಮತಯಾಚನೆ

ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಪರ 
ಬಿ. ನಾರಾಯಣ ಸ್ವಾಮಿ ಮತಯಾಚನೆ



ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನ ಕಂಠೀರವ ನಗರದ ಹಲವು ಏರಿಯಾ ಗಳಲ್ಲಿ  ಕ್ಷೇತ್ರದ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಬಿ,ನಾರಾಯಣ ಸ್ವಾಮಿ  ಅವರ ನೇತೃತ್ವದಲ್ಲಿ ಜಾಗೃತಿ ಮಹಿಳಾ ಸಂಘ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಹಯೋಗದಲ್ಲಿ ಮಹಾಲಕ್ಷ್ಮೀ ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ, ಗೋಪಾಲಯ್ಯ ಪರ ಮತಯಾಚನೆ ನಡೆಸಿದರು.


      ಕ್ಷೇತ್ರದ ಜನರ ನಡುವೆ ಜನ ನಾಯಕರಾಗಿ ಸಚಿವ ಕೆ.ಗೋಪಾಲಯ್ಯ ರವರು ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲಿ ಹೋದರೂ ಜನರು ತಾವೇ ಸ್ವತಃ ಮುಂದೆ ಬಂದು ನಮ್ಮ ಮತ ಕೆ, ಗೋಪಾಲಯ್ಯ ನವರಿಗೆ ಎಂದು ಹೇಳುತ್ತಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ಮಾತನಾಡಿದ ಬಿ, ನಾರಾಯಣ ಸ್ವಾಮಿ ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ಈ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಹಿತ ಕಾಯುವ ಕಾಯಕಯೋಗಿ ಸನ್ಮಾನ್ಯ ಶ್ರೀ ಗೋಪಾಲಯ್ಯ ನವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಗೋಪಾಲಯ್ಯ ಅವರ ಗೆಲುವು ಖಚಿತ ಎಂದ ನಾರಾಯಣ ಸ್ವಾಮಿ ಅವರು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ಶ್ರೀ ನರೇಂದ್ರ ಮೋದಿಯವರು, ಅಮಿತ್ ಷಾ, ನಡ್ಡಾ ಜೀ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷರಾದ ನಳೀನ್  ಕುಮಾರ್ ಕಟೀಲ್ ಹಾಗೂ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವು ದೇಶ ಹಾಗೂ ರಾಜ್ಯದಲ್ಲಿ ಮತ್ತೊಮ್ಮೆ ಡಬಲ್ ಎಂಜಿನ್ ಸರ್ಕಾರ ಮತ್ತೆ  ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.


 ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್ ಸ್ಥಳೀಯ ಮುಖಂಡರಾದ ಬೈಲಪ್ಪ, ಅಂಬರೀಷ್, ಅಮೀರ್ ಹನುಮಂತರಾಜು, ಬೈರಪ್ಪ ಜಾಗೃತಿ ಮಹಿಳಾ ಸಂಘದ ಇಂದುಮತಿ ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.



Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ