ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ

ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ


ಬೆಂಗಳೂರು : 10 ರಂದು ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ಭಾರತೀಯ ಜನತಾ ಪಕ್ಷಕ್ಕೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚಿನ ಬಹುಮತ ದೊಂದಿಗೆ ಬೆಂಬಲ ನೀಡಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೃಷ್ಣಾನಂದ ನಗರ  ಏಕ್ಸ್ಪೋರ್ಟಿಂಗ್ ಸಿಂಡಿಕೇಟ್  ಪ್ರೈವೇಟ್ ಗಾರ್ಮೆಂಟ್ಸ್ ನಲ್ಲಿ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಸಭೆ ನಡೆಸಿ ಅವರು ಮಾತನಾಡಿದರು.


ಕೋವಿಡ್ ನಂತಹ ಮಹಾಮಾರಿ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ ಆಕ್ಸಿಜನ್  ಹಾಗೂ ಉಚಿತ ಲಸಿಕೆಯನ್ನು ಒದಗಿಸಲಾಗಿದೆ ಎಂದರು.

ಕೋವಿಡ್ ಅವಧಿಯಲ್ಲಿ  350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕ್ಷೇತ್ರವನ್ನು ಇನ್ನೂ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ ಎಂದರು.

ಸರ್ಕಾರಿ ಶಾಲೆ. ಸುಮಾರು ಒಂದುವರೆ ಸಾವಿರ ಮಕ್ಕಳು ಪ್ರವೇಶವನ್ನು ಪಡೆದುಕೊಳ್ಳುತ್ತಿದ್ದಾರೆ.  ಉಚಿತವಾಗಿ ಶಿಕ್ಷಣವನ್ನು ಕೊಡಲು ಮುಖಂಡರುಗಳು ಕ್ರಮ ವಹಿಸಲಾಗಿದೆ ಎಂದು ಹೇಳಿದರು. 

ಇದೇ ಸಂದರ್ಭದಲ್ಲಿ  ಮಾಜಿ ಶಾಸಕ ನೆಲ ನರೇಂದ್ರ ಬಾಬು ಮಾಜಿ ಬಿಬಿಎಂಪಿ ಸದಸ್ಯ ಮಹದೇವು, ರಾಜೇಂದ್ರ ಕುಮಾರ್, ರೇವಣ್ಣ, ಆನಂದ , ಲಕ್ಷ್ಮಣ್ ಪೂಜಾರಿ,ಗಾರ್ಮೆಂಟ್ಸ್ ನ ಮಾಲೀಕರು ಹಾಗೂ ಮುಖಂಡರು ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ