ಡಾ.ಬಿ.ಆರ್.ಅಂಬೇಡ್ಕರ್ ರವರ 64ನೇ ಮಹಾ ಪರಿನಿರ್ವಾಣ ಕಾರ್ಯಕ್ರಮ
ದಲಿತ ಯುವಕರ ಸೇವಾದಳದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣದ ದಿನ ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಂದರ್ಭದಲ್ಲಿ ಪ್ರಸ್ತಾಪಿಸಲಾಗಿದ ಅಂಶಗಳು ಸರಿಯಾದ ರೀತಿಯಲ್ಲಿ ಅನುಷ್ಠಾನ ಗೊಂಡರೆ ಅವರಆಶಯಗಳನ್ನು ಈ ಡೇರಿಸಿದಂತಾಗುತ್ತದೆ ಎಂದು ದಲಿತ ಯುವಕರ ಸೇವಾದಳದ ಅಧ್ಯಕ್ಷ ಎಸ್. ವೆಂಕಟೇಶ್ ಹೇಳಿದ್ದಾರೆ. ವಿಡಿಯೋ ನೋಡಲು ಈ ಕೆಳಗೆ ಕ್ಲಿಕ್ ಮಾಡಿ Click here to watch this video ಡಾ.ಬಿ.ಆರ್.ಅಂಬೇಡ್ಕರ್ 64ನೇ ಮಹಾ ಪರಿನಿರ್ವಾಣದ ದಿನವಾದ ಇಂದು ವಿಧಾನ ಸೌಧ ಮುಂಭಾಗದಲ್ಲಿರುವ ಪ್ರತಿಮೆಗೆ ಪುಷ್ಪವಿರಿಸಿ ಮಾತನಾಡಿದ ಅವರು. ಅಂಬೇಡ್ಕರ್ ಅವರು ಬಡವರ ಹಾಗೂ ದಲಿತರ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಇವುಗಳು ನಿಜವಾಗಲೂ ಬಡವರಿಗೆ ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ನಮ್ಮ ಸಂಘಟನೆ ವತಿಯಿಂದ ಬೆಂಗಳೂರಿನ ವಿವಿಧಡೆ ಸುಮಾರು ಎರಡು ಸಾವಿರ ಮಂದಿ ದಲಿತ ಬಡವರಿಗೆ ಹಕ್ಕುಪತ್ರ ಕೊಡಿಸುವಲ್ಲಿ ಹೋರಾಟ ನಡೆಸಿದ್ದೇವೆ ಎಂದರು.