Posts

ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ

Image
ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ   ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ ಬೆಂಗಳೂರು ಗ್ರಾಮಾಂತರ : ಆನೇಕಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಶ್ರೀನಿವಾಸ್  ರವರು  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭ್ಯರ್ಥಿ. ಅವರ ಭಾವಚಿತ್ರ ಇಡಿದು  ಮತವನ್ನು ಕೇಳಿದ್ದೇವೆ. ಕ್ಷೇತ್ರದ ಜನರು ಹೆಚ್ಚಿನ ಬಹುಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕು ಎಂದು ಸ್ಥಳೀಯ ಶಾಸಕರು ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಮನವಿ ಮಾಡಿದರು.        ಬೆಂಗಳೂರು ಗ್ರಾಮಾಂತರ ಆನೇಕಲ್ ತಾಲೂಕಿನಲ್ಲಿ ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರವಾಗಿ ಮತಯಾಚನೆ ನಡೆಸಿ ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಒಕ್ಕಲಿಗ ಸಮುದಾಯ  ಪ್ರಬಲವಾದ ಸಮುದಾಯ. ಬೆಂಗಳೂರಿನ ನಾಡಪ್ರಭು ಕೆಂಪೇಗೌಡರು ಕಟ್ಟಿರುವಂತಹ ಇತಿಹಾಸವನ್ನು ಸೂರ್ಯ ಹಾಗೂ ಚಂದ್ರ ಇರುವವರೆಗೂ ಸಾಧ್ಯವಿಲ್ಲ ಎಂದರು.                 ಪ್ರತಿನಿತ್ಯ ನಾಡಪ್ರಭು ಕೆಂಪೇಗೌಡರನ್ನು  ನಾವೆಲ್ಲರೂ ಪ್ರತಿನಿತ್ಯ ಪೂಜೆ ಮಾಡಬೇಕು ಒಕ್ಕಲಿಗ ಸಮುದಾಯ ಒಂದು ಜಾತಿಗೆ ಸೀಮಿತವಾಗದೆ ಸಹಾಯ ಮಾಡುವುದಿಲ್ಲ.  ಕಷ್ಟಪಟ್ಟು ದುಡಿಯುವುದು ನಾವೆಲ್ಲರೂ ರೈತ ಕುಟುಂಬದವರು ಎಂದರು.            ಅನೇಕ ಸಮುದಾಯಗಳಿಗೆ ಆಶ್ರಯವನ್ನು ಕೊಟ್ಟು ಇವತ್ತು ರಾಜ್ಯದಲ್ಲಿ ಕೆಂಗಲ್ ಹನುಮಂತಯ್ಯ...

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ

Image
ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ  ಸಚಿವ ಕೆ.ಗೋಪಾಲಯ್ಯ ರೋಡ್ ಶೋ ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರದಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಬೃಹತ್ ರೋಡ್ ಶೋ ನಡೆಸಿದರು.      ಗುಜರಾತ್ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಭಾಯಿ ಪಟೇಲ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್,ಮಾಜಿ ಉಪಮಹಾಪೌರರಾದ ರಂಗಣ್ಣ, ಬಿಜೆಪಿ ಮುಖಂಡರು, ಚಲನಚಿತ್ರ ನಿರ್ಮಾಪಕರಾದ ಗಂಗಾಧರ್ , ಮಾಜಿ ಪಾಲಿಕೆ ಸದಸ್ಯೆ ದೀಪಾ ನಾಗೇಶ್ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು     ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರ 9ವರ್ಷದ ಆಡಳಿತ ಮತ್ತು ರಾಜ್ಯ ಸರ್ಕಾರದ ಪಾರದರ್ಶಕ ಆಡಳಿತ, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಮೇಲೆ ಮತಯಾಚನೆ ಮಾಡಲಾಗುತ್ತಿದೆ. ಮತದಾರರು ಬಿಜೆಪಿ ಪಕ್ಷದ ಜನಪರ ಆಡಳಿತ ನೋಡಿ ದೇಶ ರಕ್ಷಣೆ ಮತ್ತು ಅಭಿವೃದ್ದಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸ್ವಯಂಪೇರಿತರಾಗಿ ಭಾಗವಹಿಸುತ್ತಿದ್ದಾರೆ.        ಕಾಂಗ್ರೆಸ್ ಪಕ್ಷವನ್ನು ದೇಶದ ಜನರು ತಿರಸ್ಕಾರ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷ 65ವರ್ಷ ಈ ದೇಶವನ್ನು ಲೂಟಿ ಮಾಡಿದರು ಎಂದು ಹೇಳಿದರು. ರಾಜ...

ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯರವರ ಪರ ಬಿ. ನಾರಾಯಣ ಸ್ವಾಮಿ ಮತಯಾಚನೆ

Image
ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಪರ  ಬಿ. ನಾರಾಯಣ ಸ್ವಾಮಿ ಮತಯಾಚನೆ ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನ ಕಂಠೀರವ ನಗರದ ಹಲವು ಏರಿಯಾ ಗಳಲ್ಲಿ  ಕ್ಷೇತ್ರದ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಬಿ,ನಾರಾಯಣ ಸ್ವಾಮಿ  ಅವರ ನೇತೃತ್ವದಲ್ಲಿ ಜಾಗೃತಿ ಮಹಿಳಾ ಸಂಘ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಹಯೋಗದಲ್ಲಿ ಮಹಾಲಕ್ಷ್ಮೀ ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ, ಗೋಪಾಲಯ್ಯ ಪರ ಮತಯಾಚನೆ ನಡೆಸಿದರು.       ಕ್ಷೇತ್ರದ ಜನರ ನಡುವೆ ಜನ ನಾಯಕರಾಗಿ ಸಚಿವ ಕೆ.ಗೋಪಾಲಯ್ಯ ರವರು ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲಿ ಹೋದರೂ ಜನರು ತಾವೇ ಸ್ವತಃ ಮುಂದೆ ಬಂದು ನಮ್ಮ ಮತ ಕೆ, ಗೋಪಾಲಯ್ಯ ನವರಿಗೆ ಎಂದು ಹೇಳುತ್ತಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ಮಾತನಾಡಿದ ಬಿ, ನಾರಾಯಣ ಸ್ವಾಮಿ ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ಈ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಹಿತ ಕಾಯುವ ಕಾಯಕಯೋಗಿ ಸನ್ಮಾನ್ಯ ಶ್ರೀ ಗೋಪಾಲಯ್ಯ ನವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಗೋಪಾಲಯ್ಯ ಅವರ ಗೆಲುವು ಖಚಿತ ಎಂದ ನಾರಾಯಣ ಸ್ವಾಮಿ ಅವರು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ಶ್ರೀ ನರೇಂದ್ರ ಮೋದಿಯವರು, ಅಮಿತ್ ಷಾ, ನಡ್ಡಾ ಜೀ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರ...

ಸಚಿವ ಕೆ. ಗೋಪಾಲಯ್ಯ ಮತ ಯಾಚನೆ

Image
  ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ   ಸಚಿವ ಕೆ. ಗೋಪಾಲಯ್ಯ ಮತ ಯಾಚನೆ ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡ್ ನಲ್ಲಿರುವ ಆರ್ ಎಂ ಸಿ ಯಾರ್ಡ್ ನಲ್ಲಿ ಇಂದು ಇಲ್ಲಿಯ ಮಾರುಕಟ್ಟೆ ವರ್ತಕರು ಹಾಗೂ ವ್ಯಾಪಾರಸ್ಥರು, ಹಾಗೂ ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಸಚಿವ ಕೆ ಗೋಪಾಲಯ್ಯ ಮತ ಯಾಚನೆ ಮಾಡಿದರು.  ಒಂದು ಮಾರುಕಟ್ಟೆ ದಾಸನಪೂರ ಕ್ಕೆ ತೆರವು ಮಾಡಬೇಕು ಎಂದು ಅಂದು ಹೇಳಿದಾಗ ನಾನು ಮುಂದೆ ನಿಂತು ನಿಮ್ಮ ಕಷ್ಟ ಹಾಗೂ ಬವಣೆ ನೀಗಿಸಲು ನಾನು ಅಂದು ಹೆದ್ದಾರಿ ತಡೆ ಮಾಡಿ ಈ ಸ್ಥಳದಲ್ಲಿರುವ ನಿಮ್ಮೆಲ್ಲರ ಅಂಗಡಿ ಮುಗ್ಗಟ್ಟುಗಳು ತೆರವು ಮಾಡದಂತೆ ಹೋರಾಟ ಮಾಡಿ ಉಳಿಸಿರುವೆ, ಜೊತೆಗೆ ನಿಮ್ಮ ಮಕ್ಕಳ ಶೈಕ್ಷಣಿಕ ಉದ್ಧಾರಕ್ಕಾಗಿ ಕ್ಷೇತ್ರದಲ್ಲಿ ಒಳ್ಳೆಯ ಗುಣಮಟ್ಟದ ಶಾಲೆ ಅಭಿವೃದ್ಧಿ ಮಾಡಿ ಉಚಿತ ಶಿಕ್ಷಣ ನೀಡುವಲ್ಲಿ ನಾನು ಹಾಗೂ ನಮ್ಮ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದ್ದೇವೆ. ಜೊತೆಗೆ ಕೊರೋನ ಸಂಕಷ್ಟದಲ್ಲಿ ಫುಡ್ ಕಿಟ್ ಔಷಧಿ ಕಿಟ್ ಹಾಗೂ ಆಕ್ಸಿಜನ್  ಸೇರಿದಂತೆ ಹಲವು ರೀತಿಯ ಸಹಾಯ ಮಾಡಿದ್ದೇನೆ. ಮುಂಬರುವ 10 ನೇ ತಾರೀಖಿನ ದಿನ ತಾವೆಲ್ಲರೂ ತಪ್ಪದೆ ಭಾರತೀಯ ಜನತಾ ಪಕ್ಷದ ಚಿನ್ಹೆ ಕಮಲದ ಗುರುತಿಗೆ ಮತ ಚಲಾಯಿಸುವ ಮೂಲಕ ನಮ್ಮನ್ನ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಮಾಡಲಿಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು....

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಅಣ್ಣಮಲೈ ರೋಡ್ ಶೋ

Image
ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ರೋಡ್ ಶೋ   ಕೆ. ಗೋಪಾಲಯ್ಯ ಪರ ಮತಯಾಚನೆ ಬೆಂಗಳೂರು : ಮೇ 2. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದದಲ್ಲಿಂದು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅಣ್ಣಾಮಲೈ ರವರಿಂದ ರೋಡ್ ಶೋ ಕಾರ್ಯಕ್ರಮವುದಲ್ಲಿ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ನವರು ಮಾತನಾಡಿದರು. ರೋಡ್ ಶೋ ಕಾರ್ಯಕ್ರಮವು ಡಾ.ರಾಜಕುಮಾರ್ ಪ್ರತಿಮೆ ಬಳಿಯಿಂದ ಜೆಸಿ ನಗರ,  ಕುರುಬರಹಳ್ಳಿ ಸರ್ಕಲ್ ಮಾರ್ಗವಾಗಿ ಸತ್ಯನಾರಾಯಣ ಚೌಲ್ಟ್ರಿ ಸರ್ಕಲ್ ವರೆಗೆ ನಡೆಯಿತು. ಕ್ಷೇತ್ರದಲ್ಲಿ ಈವರೆಗೆ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ಅರಿತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಂಡು ತಮ್ಮೆಲ್ಲರ ಕಲ್ಯಾಣಕ್ಕೆ ಸದಾ ಶ್ರಮಿಸುತ್ತೇನೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನನಗೆ ಬಹುಮತದಿಂದ  ಗೆಲ್ಲಿಸಬೇಕೆಂದು ಮನವಿ ಮಾಡಿದರು. ಜನಸಾಮಾನ್ಯರಿಗೆ ಕೋವಿಡ್ ಅವಧಿಯಲ್ಲಿ, ಉಚಿತವಾಗಿ ಆರೋಗ್ಯ ಕಿಟ್ ಹಾಗೂ ಆಹಾರ ಕಿಟ್, ಆಕ್ಸಿಜನ್, ಮಾತ್ರೆಗಳನ್ನು ನೀಡಿ ಜನಸಾಮಾನ್ಯರ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಜೊತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಕ್ಷೇತ್ರದ ಜನರ ಉಳಿವಿಗಾಗಿ ಬಹಳ ಕಾಳಜಿ ವಹಿಸಲಾಗಿದೆ ಎಂದರು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ಜನಸಾಮಾನ್ಯರ ಅನುಕೂಲವಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮೂರು ಬಾರಿ...

ಮಹಿಳೆಯರ ಆರೋಗ್ಯದ ಮೇಲೆ ಗಮನ ಹರಿಸುವ ನಿಟ್ಟಿನಲ್ಲಿ ಮಾ ಕಾವೇರಿ ಆಸ್ಪತ್ರೆಯಲ್ಲಿ ಪೆರಿನಾಟಾಲಜಿ ವಿಭಾಗ ಪ್ರಾರಂಭ

Image
 ಮಾ ಕಾವೇರಿ ಆಸ್ಪತ್ರೆಯಲ್ಲಿ ಪೆರಿನಾಟಾಲಜಿ ವಿಭಾಗ ಪ್ರಾರಂಭ 

ಮಹಿಳೆಯರ ಆರೋಗ್ಯದ ಮೇಲೆ ಗಮನ ಹರಿಸುವ ನಿಟ್ಟಿನಲ್ಲಿ ಮಾ ಕಾವೇರಿ ಆಸ್ಪತ್ರೆಯಲ್ಲಿ ಪೆರಿನಾಟಾಲಜಿ ವಿಭಾಗ ಪ್ರಾರಂಭ

Image
ಮಾ ಕಾವೇರಿ ಆಸ್ಪತ್ರೆಯಲ್ಲಿ ಪೆರಿನಾಟಾಲಜಿ ವಿಭಾಗ ಪ್ರಾರಂಭ   ಬೆಂಗಳೂರು :  ಮಹಿಳೆಯರ ಪ್ರಸವಪೂರ್ವದಿಂದ ಪ್ರಸವದ ನಂತರದ ಅವಧಿಯವರೆಗೆ ನಿರಂತರವಾದ ಆರೈಕೆಯು ಮಗುವಿನ ಆರೋಗ್ಯ ಹಾಗೂ ಬೆಳವಣಿಗೆಗೆ ತುಂಬಾ ಮುಖ್ಯವಾಗಿದೆ ಎಂದು ಬೆಂಗಳೂರಿನ ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್. ವಿಜಯ್ ಭಾಸ್ಕರನ್ ಹೇಳಿದರು.       ಕಾವೇರಿ ಆಸ್ಪತ್ರೆ ಹಾಗೂ ಮೆಡಿಸ್ಕ್ಯಾ ನ್ ಸಂಯುಕ್ತಾಶ್ರಯದಲ್ಲಿ ಆ ಕಾವೇರಿ ಆಸ್ಪತ್ರೆಯಲ್ಲಿ ಪ್ರಾರಂಭವಾಗಿರುವ ಪೆರಿನಾಟಾಲಜಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರು, ಗಾಳಿ ಹಾಗೂ ಆಹಾರಗಳಿಂದ ಆರೋಗ್ಯ ಕ್ಷೀಣಿಸುತ್ತಿದೆ ಅದರಲ್ಲೂ ಗರ್ಭಿಣಿಯರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಭ್ರೂಣದಲ್ಲಿರುವ ಮಗುವಿನ ಮೇಲೆ ಹೆಚ್ಚು ಪರಿಣಾಮಕಾರಿಯಾಗಲಿದೆ.            ಇದನ್ನು ಮನಗೊಂಡು ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಮ್ಮ ಕಾವೇರಿ ಆಸ್ಪತ್ರೆ ಹಾಗೂ ಮೆಡಿಸ್ಕ್ಯಾನ್ ಸಂಯುಕ್ತಾಶ್ರಯದಲ್ಲಿ ಪೆರಿನಾಟಾಲಜಿ ವಿಭಾಗವನ್ನು ಪ್ರಾರಂಭಿಸಿದ್ದೇವೆ. ಈ ಪೆರಿನಾಟಾಲಜಿ ವಿಭಾಗವು ಭ್ರೂಣದ ಚಿತ್ರಣ, ರೋಗನಿರ್ಣಯ, ಸಮಾಲೋಚನೆ ಮತ್ತು ಭ್ರೂಣದ ಚಿಕಿತ್ಸೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರವಾಗಿದ್ದು ಒಂದೇ ಸೂರಿನಡಿ ಎಲ್ಲ ಚಿಕಿತ್ಸಾ ಸೌಲಭ್ಯಗಳು ಮುಂದುವರಿಯಲಿದೆ. ಪೆರಿನಾಟಾಲಜಿ ಎನ್...