Posts

ಅಬ್ಬಾಸ್ ಖಾನ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆಯ ಕಾಲೇಜು ದಿನಾಚರಣೆ

Image
ಅಬ್ಬಾಸ್ ಖಾನ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆಯ ಕಾಲೇಜು ದಿನಾಚರಣೆ ಬೆಂಗಳೂರು: ನಗರದ ಕಬ್ಬನ್‌ಪೇಟೆಯಲ್ಲಿರುವ Abbas Khan College for Women (ಅಬ್ಬಾಸ್ ಖಾನ್ ಮಹಿಳಾ ಕಾಲೇಜು) ವತಿಯಿಂದ ಕಾಲೇಜು ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ಎಂ.ಎ ಅಧ್ಯಕ್ಷ ಜನಾಬ್ ಫಾರೂಕ್ ಮಹಮೂದ್ ವಹಿಸಿ ಮಾತನಾಡಿ, “ಕಾಲೇಜು ಜೀವನವು ಕೇವಲ ಪಾಠ ಹಾಗೂ ಪ್ರದರ್ಶನಗಳಿಗೆ ಮಾತ್ರ ಸೀಮಿತವಲ್ಲ. ಅದು ಜೀವನದ ಗುರಿಯನ್ನು ಅರಿತುಕೊಳ್ಳುವ, ಆತ್ಮಪರಿಶೀಲನೆ ಮಾಡುವ ಹಾಗೂ ನಮ್ಮ ಹೊಣೆಗಾರಿಕೆಯನ್ನು ನೆನಪಿಸಿಕೊಳ್ಳುವ ಅಮೂಲ್ಯ ಕ್ಷಣವಾಗಿದೆ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. “ಶಿಕ್ಷಣವೇ ಪ್ರತಿಯೊಬ್ಬ ವಿದ್ಯಾರ್ಥಿಯ ಅತಿ ದೊಡ್ಡ ಶಕ್ತಿ. ಪವಿತ್ರ ಕುರ್‌ಆನ್‌ನಲ್ಲಿ ಮೊದಲಾಗಿ ಪ್ರಕಟವಾದ ಪದವೇ ‘ಇಖ್ರಾ’ – ಓದಿ. ಆದ್ದರಿಂದ ಕಲಿಕೆ ಒಂದು ಆಯ್ಕೆಯಲ್ಲ, ಅದು ಪ್ರತಿಯೊಬ್ಬರ ಕರ್ತವ್ಯ. ಪಾಠಪುಸ್ತಕಗಳು ಮತ್ತು ಪರೀಕ್ಷೆಗಳು ಮುಖ್ಯವಾದರೂ, ನಿಜವಾದ ಶಿಕ್ಷಣವು ಅದರಾಚೆಗೆ ಸಾಗಬೇಕು” ಎಂದು ಹೇಳಿದರು. ಕಾಲೇಜಿನ 50ನೇ ವರ್ಷದ ಸೇವೆಯನ್ನು ಉಲ್ಲೇಖಿಸಿದ ಅವರು, ಸಂಸ್ಥೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಬದ್ಧವಾಗಿದೆ ಎಂದು ತಿಳಿಸಿದರು. “ವಿದ್ಯಾರ್ಥಿಗಳು ಬೌದ್ಧಿಕವಾಗಿ ಶಕ್ತಿಶಾಲಿ, ಭಾವನಾತ್ಮಕವಾಗಿ ಆತ್ಮವಿಶ್ವಾಸ ಹೊಂದಿದ, ದೈಹಿಕವಾಗಿ ಶಿಸ್ತುಬದ್ಧ ಹಾಗೂ ಸಾಮಾಜಿಕವಾಗಿ ಜಾಗೃತ ನಾಗರಿಕರಾಗಬೇಕು” ಎಂದು ಹೇಳಿದರ...

ಪೂಜಾ ಆಚಾರ್ಯರಿಗೆ ನ್ಯಾಯ ಕೊಡಿಸುವವರೆಗೆ ಹೋರಾಟ : ಕೆ ಪಿ ನಂಜುಂಡಿ

Image
  ಪೂಜಾ ಆಚಾರ್ಯರಿಗೆ ನ್ಯಾಯ ಕೊಡಿಸುವವರೆಗೆ ಹೋರಾಟ : ಕೆ ಪಿ ನಂಜುಂಡಿ ಬೆಂಗಳೂರು : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ನಗರದ ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಹಾಸಭೆಯ ಸಂಸ್ಥಾಪಕ ಅಧ್ಯಕ್ಷರಾದ ಕೆಪಿ ನಂಜುಂಡಿ ಮಾತನಾಡಿ, ಪುತ್ತೂರಿನ ಬಡ ಹೆಣ್ಣುಮಗಳಾದ ಪೂಜಾ ಆಚಾರ್ಯರ ಮೇಲೆ ಅತ್ಯಾಚಾರ ಎಸಗಿ ಒಂದು ಗಂಡು ಮಗುವಿನ ಹುಟ್ಟಿಗೆ ಕಾರಣನಾದ ಶ್ರೀಕೃಷ್ಣ ಜೆ. ರಾವ್ ಹಾಗೂ ಉಳಿದ ಆರೋಪಿಗಳಾದ ತಂದೆ ಪಿ.ಜಿ. ಜಗನ್ನಿವಾಸ ರಾವ್, ಸಹೋದರಿ ವೈಷ್ಣವಿ ಪಿ.ಜಿ. ರಾವ್ ಮತ್ತು ದೊಡ್ಡಪ್ಪ ಚಂದ್ರಶೇಖರ್ ಪಿ.ಜಿ. ಅವರು ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವಾರು ದಿನಗಳಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಕಳೆದ ಏಪ್ರಿಲ್ 24ರಂದು ಘನ ಉಚ್ಚ ನ್ಯಾಯಾಲಯವು ಆರೋಪಿಯಾದ ಪಿ.ಜಿ. ಶ್ರೀಕೃಷ್ಣ ರಾವ್ ಅವರಿಗೆ ಮಧ್ಯಂತರ ತಡೆಯಾಜ್ಞೆಯನ್ನು ಷರತ್ತುಬದ್ಧವಾಗಿ ನೀಡಿತ್ತು. ನ್ಯಾಯಾಲಯದ ಷರತ್ತಿನ ಪ್ರಕಾರ ಮೇ 1ರಂದು 75 ಸಾವಿರ ರೂ.ಗಳನ್ನು ಹಾಗೂ ಕೇಸ್‌ನ ಅಂತಿಮ ತೀರ್ಪು ಬರುವವರೆಗೂ ಪ್ರತಿ ತಿಂಗಳು 75 ಸಾವಿರ ರೂ.ಗಳನ್ನು ದೂರುದಾರರಾದ ಪೂಜಾ ಆಚಾರ್ಯ ಮತ್ತು ಮಗುವಿನ ಜೀವನೋಪಾಯ ಹಾಗೂ ಕಲ್ಯಾಣಕ್ಕಾಗಿ ನೀಡುವಂತೆ ಆದೇಶಿಸಲಾಗಿತ್ತು ಎಂದು ಹೇಳಿದರು. ಆದರೆ ಮೇ 1ರಂದು ನೀಡಬೇಕಿದ್ದ 75 ಸಾವಿರ ರೂ.ಗಳನ್ನು ಇದುವರೆಗ...

Lions District 317A Golden Jubilee a grand success – a confluence of service activities

Image
  ಲಯನ್ಸ್ ಜಿಲ್ಲಾ 317ಎ ಸುವರ್ಣ ಮಹೋತ್ಸವ ಅದ್ದೂರಿ ಯಶಸ್ಸು – ಸೇವಾ ಚಟುವಟಿಕೆಗಳ ಮಹಾಸಂಗಮ ಬೆಂಗಳೂರು : ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲಾ 317ಎ ವತಿಯಿಂದ 50ನೇ ಸುವರ್ಣ ಮಹೋತ್ಸವ ಹಾಗೂ ಜಿಲ್ಲಾ ಸಮಾವೇಶವು ವಿಜಯನಗರದ ಬಂಟ್ಸ್ ಸಂಘ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. ಐದು ದಶಕಗಳ ಸೇವಾ ಪಯಣವನ್ನು ಸ್ಮರಿಸುವ ಈ ಮಹೋತ್ಸವವು ಸಮಾಜ ಸೇವೆ, ಮಾನವೀಯ ಮೌಲ್ಯಗಳು ಹಾಗೂ ಬದ್ಧತೆಯ ಪ್ರತೀಕವಾಗಿ ಗಮನ ಸೆಳೆಯಿತು. ಜಿಲ್ಲಾ ರಾಜ್ಯಪಾಲರಾದ ಡಾ. ಜಿ. ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಲಯನ್ಸ್ ಅಂತರರಾಷ್ಟ್ರೀಯ ದ್ವಿತೀಯ ಉಪಾಧ್ಯಕ್ಷರಾದ ಡಾ. ಮನೋಜ್ ಷಾ ಉದ್ಘಾಟಿಸಿದರು. ಲಯನ್ಸ್ ಇಂಟರ್‌ನ್ಯಾಷನಲ್ ಮಾಜಿ ನಿರ್ದೇಶಕರಾದ ವಿಜಯ್ ಕುಮಾರ್ ರಾಜು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ಮಲ್ಟಿಪಲ್ ಕೌನ್ಸಿಲ್ ಚೇರ್‌ಪರ್ಸನ್ ಮೋಹನ್ ಕುಮಾರ್ ಎನ್, ಪ್ರಥಮ ಉಪ ರಾಜ್ಯಪಾಲರಾದ ಕೆ. ಈಶ್ವರನ್, ದ್ವಿತೀಯ ಉಪ ರಾಜ್ಯಪಾಲರಾದ ಶಶಿಧರ್ ಗಂಜಿಗಟ್ಟಿ, ಆತಿಥೇಯ ಸಮಿತಿಯ ಅಧ್ಯಕ್ಷ ವೆಂಕಟೇಶ್ ಯಾದಾಳಂ, ಲಯನ್ ಅಶೋಕ್ ಕುಲಕರ್ಣಿ, ಲಯನ್ ಎಸ್. ಮನೋಜ್ ಕುಮಾರ್, ಹರಿಪ್ರಸಾದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುವರ್ಣ ಮಹೋತ್ಸವದ ಅಂಗವಾಗಿ 25 ಶಹೀದ್ ಕುಟುಂಬಗಳಿಗೆ ಸನ್ಮಾನ, 25 ವೀರ ಯೋಧರಿಗೆ ಗೌರವ, ವಿಕಲಚೇತನರಿಗೆ 6 ಕಸ್ಟಮೈಸ್ ವೀಲ್‌ಚೇರ್‌ಗಳ ವಿತರಣೆ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಮಕ್ಕಳ ...

ಬಸವಣ್ಣನವರ ತತ್ವಗಳನ್ನು ದೇಶ-ವಿದೇಶಗಳಿಗೆ ಪಸರಿಸಲಾಗುತ್ತಿದೆ : ಸಚಿವ ವಿ ಸೋಮಣ್ಣ

Image
  ಬಸವಣ್ಣನವರ ತತ್ವಗಳನ್ನು ದೇಶ-ವಿದೇಶಗಳಿಗೆ ಪಸರಿಸಲಾಗುತ್ತಿದೆ : ಸಚಿವ ವಿ ಸೋಮಣ್ಣ   ಬೆಂಗಳೂರು : ಬಸವ ವೇದಿಕೆ ವತಿಯಿಂದ ಬಸವ ಜಯಂತಿ, ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ದೂರಿಯಾಗಿ ನೆರವೇರಿತು. ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಲೋಕಸಭಾ ಸದಸ್ಯ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಉದ್ಘಾಟಿಸಿದರು. ಕೇಂದ್ರ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, “2027ರಲ್ಲಿ ದೆಹಲಿಯಲ್ಲಿ ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಿಸುವ ಯೋಜನೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಸವಣ್ಣನವರ ತತ್ವಗಳನ್ನು ದೇಶ-ವಿದೇಶಗಳಿಗೆ ಪಸರಿಸಲಾಗುತ್ತಿದೆ” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, “ಸಮಾಜದಲ್ಲಿ ವಚನಗಳ ಅಳವಡಿಕೆಯನ್ನು ಕಡ್ಡಾಯಗೊಳಿಸಲು ಕಾನೂನು ಬಲ ಅಗತ್ಯ. ವಚನ, ಭಗವದ್ಗೀತೆ ಮತ್ತು ಉಪನಿಷತ್‌ಗಳಿಗೆ ಕಾನೂನು ಮಾನ್ಯತೆ ಸಿಕ್ಕರೆ ಸಮಾಜದಲ್ಲಿ ಬದಲಾವಣೆ ಸಾಧ್ಯ” ಎಂದು ಅಭಿಪ್ರಾಯಪಟ್ಟರು. ಬಸವ ವೇದಿಕೆಯ ಅಧ್ಯಕ್ಷ ಎಸ್. ಸೋಮಶೇಖರ್ ಮಾತನಾಡಿ, ಬಸವ ತತ್ವಗಳ ಪ್ರಚಾರ ಮತ್ತು ಅನುಷ್ಠಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರ...

kuwj ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಟರಾಜ್ ಬಿಪಿ ಆಯ್ಕೆ

Image
ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪತ್ರಕರ್ತರಾದ ನಟರಾಜ್ ಬಿ.ಪಿ. ಅವರು ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ನಗರದ ವಿವಿಧ ಪತ್ರಿಕಾ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಸ್ಯರು ತಮ್ಮ ಅಮೂಲ್ಯ ಮತಗಳ ಮೂಲಕ ನಟರಾಜ್ ಬಿ.ಪಿ. ಅವರಿಗೆ ಬೆಂಬಲ ಸೂಚಿಸಿದ್ದು, ಸಂಘಟನೆಯಲ್ಲಿ ಅವರ ಸಕ್ರಿಯತೆ ಮತ್ತು ನಿಷ್ಠೆಗೆ ಮನ್ನಣೆ ನೀಡಿದಂತಾಗಿದೆ. ಚುನಾವಣೆ ಶಾಂತಿಪೂರ್ಣ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆದಿದ್ದು, ಫಲಿತಾಂಶ ಪ್ರಕಟವಾದ ಕ್ಷಣದಿಂದಲೇ ಪತ್ರಕರ್ತ ವಲಯದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸಂಘಟನೆಯ ಹಿತಾಸಕ್ತಿಗಾಗಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿರುವ ನಟರಾಜ್ ಬಿ.ಪಿ. ಅವರು ಪತ್ರಕರ್ತರ ವೃತ್ತಿಪರ ಭದ್ರತೆ, ಸಾಮಾಜಿಕ ಗೌರವ, ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಜಾರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸಂಘಟನೆಯನ್ನು ಇನ್ನಷ್ಟು ಸಂಘಟಿತಗೊಳಿಸಿ, ಸದಸ್ಯರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಅವರು, “ನನ್ನ ಮೇಲೆ ವಿಶ್ವಾಸ ಇಟ್ಟು ಮತ ನೀಡಿದ ಪ್ರತಿಯೊಬ್ಬ ಪತ್ರಕರ್ತ ಸ್ನೇಹಿತರಿಗೆ ನಾನು ಸದಾ ಋಣಿ. ಈ ವಿಶ್ವಾಸಕ್ಕೆ ತಕ್ಕ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಂಘಟನೆಯ ಬಲವರ್ಧನೆಗಾಗಿ ಶ್ರಮಿಸುತ್ತೇನೆ”...

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಬಾಲಕನ ಮೇಲೆ ಹಲ್ಲೆ ಆರೋಪ

Image
ಬೆಂಗಳೂರು: ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪೋಷಕರ ಹೇಳಿಕೆಯ ಪ್ರಕಾರ, ಶ್ರೀ ಕನಕ ಇಂಗ್ಲಿಷ್ ಸ್ಕೂಲ್‌ನಲ್ಲಿ ಓದುತ್ತಿರುವ ಬಾಲಕನಿಗೆ ಶಿಕ್ಷಕಿ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಇದೇ ರೀತಿಯ ಘಟನೆ ನಡೆದಿದ್ದಾಗಿ ಪೋಷಕರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪೋಷಕರು ಶಾಲೆಗೆ ತೆರಳಿ ಪ್ರಶ್ನಿಸಿದ ಬಳಿಕ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗ ಶಿಕ್ಷಕಿ ಪೊಲೀಸರ ಮುಂದೆ ಕ್ಷಮೆಯಾಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೂ, ನಿನ್ನೆ ಮತ್ತೆ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿದಾಗ, ಅವರಿಗೆ ತಕ್ಕ ಮರ್ಯಾದೆ ನೀಡದೇ ಮಾತನಾಡಲಾಗಿದೆ ಎಂಬ ದೂರೂ ಕೇಳಿಬಂದಿದೆ. ಟಿಸಿ (Transfer Certificate) ನೀಡಿ ಶಾಲೆಯಿಂದ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇನ್ನೊಂದೆಡೆ, ಶಾಲಾ ಆಡಳಿತ ಮಂಡಳಿ “ಮಕ್ಕಳಿಗೆ ಹೊಡೆದು ಪಾಠ ಮಾಡುವುದಿಲ್ಲ; ಇಷ್ಟವಿಲ್ಲದಿದ್ದರೆ ಮಕ್ಕಳನ್ನು ಕರೆದುಕೊಂಡು ಹೋಗಬಹುದು” ಎಂದು ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

Image
ಬೆಂಗಳೂರು : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಮುದಾಯಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು, ಸೌಲಭ್ಯಗಳು ಮತ್ತು ಮೀಸಲಾತಿ ಸಂಬಂಧಿತ ವಿಚಾರಗಳನ್ನು ಚರ್ಚಿಸಿದರು. ಬಜೆಟ್‌ನಲ್ಲಿ ಶೋಷಿತ ವರ್ಗಗಳಿಗೆ ನ್ಯಾಯಸಮ್ಮತ ಹಂಚಿಕೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು. ಈ ವೇಳೆ ಸೂರ್ಯವಂಶ ಕ್ಷತ್ರಿಯ ಸಮಾಜದ ಮುಖಂಡರಾದ ರಾಘವ್ ಸೂಲೆಗೈ ಅವರು ತಮ್ಮ ಸಮಾಜ ಎದುರಿಸುತ್ತಿರುವ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿ, ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.