ಕರ್ನಾಟಕದ ಉದಯೋನ್ಮುಖ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ
ಕರ್ನಾಟಕದ ಉದಯೋನ್ಮುಖ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ಬೆಂಗಳೂರು,ಕರ್ನಾಟಕ 1-2-2018 ರಾಜ್ಯದ ಭರವಸೆ ಹಾಗೂ ಉದಯೋನ್ಮುಖ ಕ್ರೀಡಾಪಟುಗಳಿಗೆ ಉನ್ನತ ಶಿಕ್ಷಣದ ವಿದ್ಯಾರ್ಥಿವೇತನ ವಿಸ್ತರಿಸಲು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ಡಿವೈಎಸ್ಎಸ್) ಎಸ್ಡಿಎಫ್ ಜತೆ ಒಪ್ಪಂದಕ್ಕೆ ಸಹಿ ಹಾಕಿರುವುದು ಇಂದಿನ ಕಾರ್ಯಕ್ರಮವಾಗಿದೆ. ಪ್ರಾಥಮಿಕ ಹಂತವಾಗಿ ಕರ್ನಾಟಕದಿಂದ ವಿಶ್ವದರ್ಜೆಯ ಕ್ರೀಡಾಪಟುಗಳನ್ನು ಅಭಿವೃದ್ಧಿ ಪಡಿಸಲು ಡಿವೈಎಸ್ಎಸ್ ಮುಂದಾಗಿದ್ದು, ಈ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಪಾಲ್ಗೊಳ್ಳಲು ಸುಮಾರು 1000 ವಿದ್ಯಾರ್ಥಿಗಳಲ್ಲಿ ಅರ್ಹ ಕ್ರೀಡಾಪಟುಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದೆ. ಕ್ರೀಡಾ ವಿಭಾಗದ ಜತೆಗೆ ಉನ್ನತ ಶಿಕ್ಷಣ ಪಡೆಯಲು ಕ್ರೀಡಾಪಟುಗಳಿಗೆ ಉತ್ತಮ ಅವಕಾಶವಿದೆ ಎಂದು ಎಸ್ಡಿಎಫ್ ನಂಬಿಕೆ ಮೂಡಿಸಿದೆ. ಎಸ್ಡಿಎಫ್ ವಿದ್ಯಾಧಾನ ಯೋಜನೆಯೊಂದಿಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮುಂದಿನ ಮೂರು ವರ್ಷ 100 ವಿದ್ಯಾರ್ಥಿಗಳಿಗೆ ಎಸ್ಡಿಎಫ್ನಿಂದ ವಿದ್ಯಾರ್ಥಿವೇತನ ಆರ್ಥಿಕ ಸಂಕಷ್ಟದ ಹಿನ್ನೆಲೆ ಇರುವ ಹಲವು ಕ್ರೀಡಾಪಟುಗಳನ್ನು ಸರ್ಕಾರ ಆಯ್ಕೆ ಮಾಡಲಿದ್ದು, ಇಂಥ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ಎಸ್ಡಿಎಫ್ ಪ್ರಸ್ತಾಪಿಸಿದೆ. ಈ ಪ್ರಾಥಮಿಕ ಹಂತದ ಬಗ್ಗೆ ಪ್ರತಿಕ್ರಿಯಿಸಿದ ಯುವ ಸಬಲೀಕರಣ ಮತ್ತು ಕ್