Posts

ವಿಜೇತರಾದ ರೂಪದರ್ಶಿಗಳಿಗೆ ರಾಗಿಣಿ ದ್ವಿವೇದಿ

Image
ಫ್ರಾಂಕ್ಲಿನ್, ಮಧುಲಿಕ ಶ್ರೀರಾಮ್‍ಗೆ ``ಫೇಸ್ ಆಫ್ ಪೀಪಲ್’’ ಕಿರೀಟ ವಿಜೇತರಾದ ರೂಪದರ್ಶಿಗಳಿಗೆ ರಾಗಿಣಿ ದ್ವಿವೇದಿ     ಬೆಂಗಳೂರು, ಸೆಪ್ಟಂಬರ್ 11, 2018: ಆದಿತ್ಯ ಬಿರ್ಲಾ ಫ್ಯಾಷನ್ ಅಂಡ್ ರೀಟೇಲ್ ಲಿಮಿಟೆಡ್‍ನ ಯುವಪೀಳಿಗೆಯ ನೆಚ್ಚಿನ ಬ್ರ್ಯಾಂಡ್ ಆಗಿರುವ  ಪೀಪಲ್ ಬೆಂಗಳೂರಿನ  ನಾಗರಭಾವಿಯಲ್ಲಿರುವ ತನ್ನ ಸ್ಟೋರ್‍ನಲ್ಲಿ ನಗರದ ಅತಿದೊಡ್ಡ ಮಾಡೆಲ್ ಶೋಧ ಕಾರ್ಯಕ್ರಮವಾದ ``ಫೇಸ್ ಆಫ್ ಪೀಪಲ್’’ ಅನ್ನು ಆರಂಭ ಮಾಡಿದೆ. ಈ ರೂಪದರ್ಶಿಗಳ ಶೋಧ ಅಭಿಯಾನದಲ್ಲಿ 300 ಕ್ಕೂ ಹೆಚ್ಚು ಜನರು ಮತ್ತು ರೂಪದರ್ಶಿಗಳು ಪಾಲ್ಗೊಂಡು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ಇದರಲ್ಲಿ ವಿಜೇತರಾದ ಸೇಂಟ್ ಜೋಸೆಫ್ ಸ್ವಾಯತ್ತ ಕಾಲೇಜಿನ ಫ್ರಾಂಕ್ಲಿನ್ ವೈ ಮತ್ತು ಜೈನ್ ಕಾಲೇಜಿನ ಮಧುಲಿಕ ಶ್ರೀರಾಮ್ ಅವರಿಗೆ  ಸ್ಯಾಂಡಲ್‍ವುಡ್‍ನ ಖ್ಯಾತ ತಾರೆ ರಾಗಿಣಿ ದ್ವಿವೇದಿ ಅವರು ಕಿರೀಟ ತೊಡಿಸಿದರು.       ಇದಲ್ಲದೇ, ಇಬ್ಬರಿಗೂ ತಲಾ 20,000 ರೂಪಾಯಿಗಳ ನಗದು ಬಹುಮಾನವನ್ನೂ ನೀಡಲಾಯಿತು. ಈ ಇಬ್ಬರೂ ರೂಪದರ್ಶಿಗಳಿಗೆ ಪೀಪಲ್‍ನ ಡಿಜಿಟಲ್ ಜಾಹೀರಾತು ಮತ್ತು ಹೊರಾಂಗಣ ಹೋರ್ಡಿಂಗ್‍ಗಳಲ್ಲಿ ಜಾಹೀರಾತಿನಲ್ಲಿ ರೂಪದರ್ಶಿಗಳಾಗುವ ಅವಕಾಶವೂ ಸಿಕ್ಕಿದೆ.         ಈ ಸಂದರ್ಭದಲ್ಲಿ ಮಾತನಾಡಿದ ಆದಿತ್ಯ ಬಿರ್ಲಾ ಫ್ಯಾಷನ್ ಅಂಡ್ ರೀಟೇಲ್ ಲಿಮಿಟೆಡ್‍ನ ಪೀಪಲ್‍ನ ಬ್ರ್ಯಾಂಡ್ ಮುಖ್ಯಸ್ಥರಾದ ರಶ್ಮಿ ಶುಕ್ಲಾ ಅವರು, ``ವಿಭಿನ್ನ ಬಗೆಯ ಸ್ಟೈಲ್‍ಗಳು ಮತ್ತು ಹೊಸ ಹೊಸ ವಿನ್ಯ

2018-19 ರ ಬಿಬಿಎಂಪಿ ಮೇಯರ್ ಪಟ್ಟ ?

Image
2018-19 ರ ಬಿಬಿಎಂಪಿ ಮೇಯರ್ ಪಟ್ಟ ? ಮೇಯರ್ ಸ್ಥಾನದ ಮೇಲೆ ಜೆಡಿಎಸ್ ಕಣ್ಣು   ನಮಗೊಂದು ಬಾರಿ ಪಟ್ಟ ಕಟ್ಟಿ               ಬೆಂಗಳೂರು: ಬಿಬಿಎಂಪಿ ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್‍ನಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿದೆ.       ಸದ್ಯ ಸೆ.28ರಂದು ನಡೆಯಲಿರುವ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ ಮಹಿಳೆಯೊಬ್ಬರು ಮಹಾಪೌರರಾಗಿ ಆಯ್ಕೆಯಾಗಲಿದ್ದಾರೆ. ಆದರೆ ಮೇಯರ್ ಸ್ಥಾನಕ್ಕೆ ಜಯನಗರ ವಾರ್ಡ್‍ನ ಕಾಂಗ್ರೆಸ್ ಸದಸ್ಯೆ ಗಂಗಾಂಬಿಕೆ ಅಥವಾ ಶಾಂತಿನಗರ ವಾರ್ಡ್‍ನ ಸೌಮ್ಯ ಶಿವಕುಮಾರ್ ಪೈಕಿ ಯಾರನ್ನು ಆಯ್ಕೆ ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.           ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿಯೂ ಮೇಯರ್ ಸ್ಥಾನ ದಕ್ಕಿಸಿಕೊಳ್ಳಲು ಅಗತ್ಯ ಸಂಖ್ಯಾಬಲ ಹೊಂದಿಲ್ಲವಾದರೂ ತಮ್ಮ ಪಕ್ಷದ ಮಹಿಳೆ ಸದಸ್ಯೆಯನ್ನು ಚುನಾವಣಾ ಕಣಕ್ಕಿಳಿಸಲು ತೀರ್ಮಾನ ಕೈಗೊಂಡಿದೆ. ಅಲ್ಲದೆ, ಬಿಜೆಪಿ ಕಾಂಗ್ರೆಸ್‍ನಲ್ಲೀ ಮೇಯರ್ ಪಟ್ಟಕ್ಕಾಗಿ ನಡೆಯುತ್ತಿರುವ ಭಾರೀ ಪೈಪೋಟಿಯನ್ನೆ ಬಳಸಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಭಾರೀ ರಣತಂತ್ರ ರೂಪಿಸಿದೆ. ಇನ್ನು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜೆಡಿಎಸ್ ಕೂಡ ಸುಮ್ಮನೇ ಕೂರದೇ ತಾನು ಕೂಡ ಮೇಯರ್ ಪಟ್ಟಕ್ಕೆ ಇನ್ನಿಲ್ಲದ ಸರ್ಕಸ್ ಆರಂಭಿಸಿದೆ.          ಪ್ರಸುತ್ತ ಕಾಂಗ್ರೆಸ್‍ಗೆ ಮೂರು ಬಾರಿ ಮೇಯರ್ ಸ್ಥಾನ ಬಿಟ್ಟು

ಹೇರ್ ಲೈನ್ ಇಂಟರ್ ನ್ಯಾಷನಲ್

Image
ಹೇರ್ ಲೈನ್ ಇಂಟರ್ ನ್ಯಾಷನಲ್       ಬೆಂಗಳೂರು: 28 ಆಗಸ್ಟ್, 2018: ಹೇರ್ ಲೈನ್ ಇಂಟರ್ ನ್ಯಾಷನಲ್ ಹೇರ್ ಮತ್ತು ಸ್ಕಿನ್ ಕ್ಲಿನಿಕ್ ಇಂದು ಕರ್ನಾಟಕ ಸಲೂನ್ ಹಾಗು ವೆಲ್ನೆಸ್ ಸೆಂಟರ್ ಓನರ್ಸ್ ಎಸೋಸಿಯೇಶನ್ (ಕೆಎಸ್ಡಬ್ಲ್ಯುಒಎ) ಜೊತೆ ಮಾಡಿಕೊಂಡಿರುವ ಒಪ್ಪಂದವನ್ನು ಘೋಷಿಸಿಕೊಂಡಿದೆ. ಈ ಸಂಬಂಧದಿಂದ ಹೇರ್ಲೈನ್ ಇಂಟರ್ನ್ಯಾಷನಲ್ ರಾಜ್ಯಾದ್ಯಂತ 300ಕ್ಕೂ ಹೆಚ್ಚಿನ ಸಲೂನ್ಗಳಲ್ಲಿ ಟ್ರೈಕಾಲಜಿ ಮತ್ತು ಡರ್ಮಟಾಲಜಿಯ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಿದೆ. ಈ ಸಹಾಯಕೇಂದ್ರಗಳು ಗ್ರಾಹಕರ ಟ್ರೈಕಾಲಜಿ ಹಾಗು ಡರ್ಮಟಾಲಜಿ ಸಮಸ್ಯೆಗಳಿಗೆ ಸಂಬಂಧಿಸಿ ಜವಾಬ್ದಾರಿಯುತ ಸೇವೆ ಸಲ್ಲಿಸುತ್ತವೆ. ಕೂದಲು ಉದುರುವಿಕೆ ಮತ್ತು ಡರ್ಮಟಾಲಜಿಯ ಈ ಸಹಾಯಕೇಂದ್ರವನ್ನು ಮುಖ್ಯ ಅತಿಥಿಗಳಾದ ಶಾಸ್ತ್ರೀಯ ನೃತ್ಯ ಪಟು ವಾಣಿ ಗಣಪತಿ ಹಾಗೂ ಪಂಚಾಯತ್ ರಾಜ್ ನ ಕಾರ್ಯದರ್ಶಿ, ಮಾಜಿ ಆರೋಗ್ಯ ಕಮಿಷನರ್ ಎಂ.ವಿ.ಸಾವಿತ್ರಿ ಅನಾವರಣಗೊಳಿಸಿದರು.        ಆ ಬಳಿಕ ಮಾತನಾಡಿದ ವಾಣಿ ಗಣಪತಿ, "ದಿನನಿತ್ಯದ ಬದುಕಿನ ಜಂಜಡಗಳ ಮಧ್ಯೆಯೇ ವಿಶೇಷ ಆರೈಕೆಯ ಬಗ್ಗೆ ಸಾಮಾನ್ಯರಿಗೂ ತಿಳುವಳಿಕೆ ಲಭ್ಯವಾಗುವಂತೆ ಮಾಡಲು ಇದು ಅತ್ಯುತ್ಯಮ ಮಾರ್ಗವಾಗಿದೆ. ಇದು ಗ್ರಾಹಕರ ಮತ್ತು ಸಂಸ್ಥೆಯ ಮಧ್ಯೆ ಉತ್ತಮ ಬಾಂಧವ್ಯವನ್ನು ಏರ್ಪಡಿಸುತ್ತದೆ. ಟ್ರೈಕಾಲಜಿ ಮತ್ತು ತ್ವಚೆ ಆರೈಕೆಯಲ್ಲಿ ಉತ್ತಮ ಹೆಸರು ಮಾಡಿರುವ ಈ ಸಂಸ್ಥೆ ಸಲೂನ್ಗಳಿಗೂ ವಿಶ್ವಾಸಾರ್ಹ ಹೆಸರಿನ ಬೆಂಬಲವನ್ನು ನೀಡಲಿದೆ
Image
ಪ್ಲಾಸ್ಟಿಕ್ ಮತ್ತು ಕಸಮುಕ್ತ ಜಯನಗರ ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರವು 2016ರ ಮಾರ್ಚ್ 11ರಿಂದ ನಿಷೇಧಿಸಿದ್ದರು ಸಹ  ನಗರದಲ್ಲಿ ಕಂಡುಕಾಣದಂತೆ ಪ್ಲಾಸ್ಟಿಕ್ ಉಪಯೋಗವಾಗುತ್ತಿದೆ. ಇದರಿಂದಾಗಿ ನಗರದಲ್ಲಿ 300-400 ಟನ್ ಪ್ಲಾಸ್ಟಿಕ್ ತ್ಯಾಜ್ಯ ದೊರೆಯುತ್ತಿದ್ದು, ಇದು ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ. ಜಯನಗರವನ್ನು ದೇಶದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಪಣತೊಟ್ಟಿರುವ ಶಾಸಕಿ ಸೌಮ್ಯಾರೆಡ್ಡಿರವರು  ಪ್ಲಾಸ್ಟಿಕ್ ಮತ್ತು ಕಸಮುಕ್ತ ಜಯನಗರ ಜಾಗೃತಿ ಆಭಿಯಾನವನ್ನು ಆಯೋಜಿಸಿದರು. ಅಭಿಯಾನಕ್ಕೆ ನೂರಾರು ವಿದ್ಯಾರ್ಥಿಗಳು ಹಾಗೂ ನಿವಾಸಿಗಳು ಆಗಮಿಸಿದ್ದರು.

ಅದ್ದೂರಿ ಸ್ವಾತಂತ್ರ್ಯೋತ್ಸವ

Image
ಬೆಂಗಳೂರಿನ ಸೇಂಟ್ ಮಾರ್ಕ್ಸ್ ಇಂಗ್ಲೀಷ್ ಶಾಲೆಯಲ್ಲಿ  ಅದ್ದೂರಿ ಸ್ವಾತಂತ್ರ್ಯೋತ್ಸವ..      ಸೇಂಟ್ ಮಾರ್ಕ್ಸ್ ಇಂಗ್ಲಿಷ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ನ  ಉಪಾಧ್ಯಕ್ಷರಾದ  ತಿಮ್ಮರಾಜು ಅವರು ನೆರವೇರಿಸಿದರು. ಸಮಾರಂಭದಲ್ಲಿ  ಶಾಲೆಯು ಅಧ್ಯಕ್ಷರಾದ ಶ್ರೀರಂಗಮ್ಮ, ನಿವೃತ್ತ ಪ್ರಾಂಶುಪಾಲರಾದ ಶಾರದಮ್ಮ, ಶಾಲಾ ಆಡಳಿತದ ಪ್ರದೀಪ್ ಕುಮಾರ್ ಡಿ.ಸಿ ಹಾಗೂ ಚೈತ್ರ ಕೆ.ಪಿ ಹಾಗೂ ಓಂ ಪ್ರಕಾಶ್ ಅವರು ಉಪಸ್ಥಿತಾಗಿದ್ದರು.             ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ತಿಮ್ಮರಾಜು ಅವರು ಮಾತನಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಪೋಷಕರು ಮಾಡಬೇಕು, ಮಕ್ಕಳ ಆಸಕ್ತಿ ಅನುಗುಣವಾಗಿ ಬೆಳೆಯಲು ಪ್ರೇರೆಪಣೆ ನೀಡಬೇಕು. ಇಂದಿನ ಮಕ್ಕಳು ಉತ್ತಮ ಕೌಶಲ್ಯವನ್ನು ವೃದ್ಧಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಜೀವಿಸಬೇಕು. ಏನಾದರೂ ಗುರಿಮಟ್ಟಲು, ಅವರ ಆಶಾಭಾವನೆ ಕೆದಿಕಿ  ನಾವು ಮಾರ್ಗದರ್ಶ ನೀಡಬೇಕು. ಪೋಷಕರು ಅವರಲ್ಲಿನ ಆಸಕ್ತಿ ತುಂಬಿ ಅವರ ಏಳಿಗೆಗೆ ಶ್ರಮಿಸಬೇಕು ಎಂದು ಮಕ್ಕಳಿಗೆ ಉಪಯುಕ್ತ  ಮಾಹಿತಿ ನೀಡಿದರು.    ಮಕ್ಕಳನ್ನು ಹೆಚ್ಚು ಅಂಕಗಳನ್ನು ಗಳಿಸಲು ಮಾತ್ರ ಸೀಮಿತಗೊಳಿಸಬಾರದು. ಅವರಲ್ಲಿನ ಪ್ರತಿಭೆಯ ಆಧಾರದ ಮೇಲೆ ಅವರಿಗೆ ಸ್ಪೂರ್ತಿ ತುಂಬಬೇಕು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲರಿಗೂ ಶುಭಾಷಯ ಕೋರುತ್ತ ತಮ್ಮ ಬಾಷಣವನ್ನು

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ದ ನೌಕರರ ಧರಣಿ ಸತ್ಯಾಗ್ರಹ

Image
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ  ವಿರುದ್ದ ನೌಕರರ ಧರಣಿ ಸತ್ಯಾಗ್ರಹ     ಬೆಂಗಳೂರು, ಜುಲೈ 09, 2018: ತಮಿಳುನಾಡು ಮೂಲಕ ಆಡಳಿತ ಮಂಡಳಿಯ ಅಧೀನದಲ್ಲಿರುವ  ಬೆಂಗಳೂರಿನ ಕೆಂಗೇರಿ ರಸ್ತೆಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ  ಆಡಳಿತ ಮಂಡಳಿ ನೌಕರರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಇಂದು ನೂರಕ್ಕೂ  ಹೆಚ್ಚು ಸಿಬ್ಬಂದಿಗಳು ಧರಣಿ ಸತ್ಯಾಗ್ರಹವನ್ನು ನಡೆಸಿದರು.        ನಗರದ ಮೌರ್ಯ ವೃತ್ತದ ಬಳಿ ಇರುವ ಗಾಂದಿ  ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ನೇತೃತ್ವವನ್ನು  ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ ವೆಂಟಕಸ್ವಾಮಿ, ಆರ್ ಆರ್ ಎಂ ಸಿ ಹೆಚ್  ಯೂನಿಯನ್ ಗೌರವ ಅಧ್ಯಕ್ಷರಾದ ಡಾ. ಸಿ ಎಸ್ ರಘು ವಹಿಸಿದ್ದರು.      ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ  ವೆಂಟಕಸ್ವಾಮಿ ಮಾತನಾಡಿ, 350 ಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಮೇಲೆ ಆಡಳಿತ ಮಂಡಳಿ  ಮೊದಲಿನಿಂದಲೂ ಕೂಡಾ ದೌರ್ಜನ್ಯವನ್ನು ನಡೆಸುತ್ತಿದೆ. 8 ರಿಂದ 10 ವರ್ಷಗಳ ಕಾಲ ಸೇವೆ  ಸಲ್ಲಿಸುತ್ತಿರುವ ನೌಕರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನೌಕರರ ಸಂಘ ಕಟ್ಟಿದ್ದೇ ತಪ್ಪಾಗಿದೆ,  ಸಂಘದ ಮುಖಂಡರುಗಳಿಗೆ ತೀವ್ರ ಕಿರುಕುಳ ನೀಡಲಾರಂಭಿಸಿದ್ದಾರೆ ಅಲ್ಲದೆ, 6 ಜನ ನೌಕರರನ್ನು  ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.

ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಒಪ್ಪಂದ

Image
ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಪ್ಪಂದ           ತುಮಕೂರಿನ ವಸಂತ ನರಸಾಪುರದಲ್ಲಿ ರಾಜ್ಯದಲ್ಲೇ ದೊಡ್ಡ ಕೈಗಾರಿಕಾ ಹಬ್  ಒಪ್ಪಂದ   ಸಜ್ಜಾಗಿದೆ.  ಹಲವು ದಿನಗಳಿಂದ ಈ ಭಾಗದ ಕೈಗಾರಿಕಾ ಹಬ್ ಇದೀಗ ಟೇಕಾಫ್ ಆಗಿದ್ದು, ಈ ಸಂಬಂಧ ಕೇಂದ್ರ ಸರಕಾರದೊಂದಿಗೆ ರಾಜ್ಯ ಸರಕಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ಚೆನ್ನೈ-ಬೆಂಗಳೂರು        ಕೈಗಾರಿಕಾ ಕಾರಿಡಾರ್ನ ಭಾಗವಾದ ತುಮಕೂರು ಕೈಗಾರಿಕಾ   ನಿರ್ಮಾಣ ಕೆಲಸಕ್ಕೆ ಮುನ್ನುಡಿ ಬರೆದಂತಾಗಿದೆ.        ರಾಜ್ಯ ಸರಕಾರ ಶೇರ್‌ಹೋಲ್ಡರ್ಸ್, ಅಗ್ರಿಮೆಂಟ್ (ಎಸ್‌ಎಚ್‌ಎ) ಹಾಗೂ ಸ್ಟೇಟ್‌ ಸಪೋರ್ಟ್‌ ಅಗ್ರಿಮೆಂಟ್ (ಎಸ್‌ಎಸ್‌ಎ) ಮಾಡಿಕೊಳ್ಳುವ ಮೂಲಕ ಕೆಲಸಕ್ಕೆ ಚಾಲನೆ ಸಿಕ್ಕಿದ್ದು. ಕೇಂದ್ರ ಸರಕಾರದ ಐದು ವಿಶೇಷ ವಾಣಿಜ್ಯ ಹಾಗೂ ಕೈಗಾರಿಕಾ ಕಾರಿಡಾರ್‌ನ ಪೈಕಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ (ಸಿಬಿಐಸಿ) ಕೂಡ ಒಂದು. ಉತ್ಪಾದನಾ ಹಾಗೂ ಕೈಗಾರಿಕಾ ಕ್ಷೇತ್ರವನ್ನು ಪ್ರೋತ್ಸಾಹಿಸುವ ಜತೆಗೆ ಉದ್ಯೋಗ ಸೃಷ್ಟಿಸಲು ಈ ಕಾರಿಡಾರ್ ನಿರ್ಮಾಣ ಹೆಚ್ಚು ಪ್ರಾಮುಖ್ಯತೆ ಪಡೆಯಲಿದೆ.     ಸಿಬಿಐಸಿ ಕಾರಿಡಾರ್ ಬೆಂಗಳೂರು ಹಾಗೂ ಚೆನ್ನೈ ಸಿಟಿಗಳನ್ನು ಲಿಂಕ್ ಮಾಡಲಿದ್ದು, 560 ಕಿ.ಮೀ. ವ್ಯಾಪ್ತಿಯಲ್ಲಿ ಕೈಗಾರಿಕಾ ಕಾರಿಡಾರ್ ಚೇತರಿಸಿಕೊಳ್ಳಲಿದೆ. ಜತೆಗೆ ಕರ್ನಾಟಕದ 16 ಜಿಲ್ಲೆ, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ಕ